ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಸಿಗಂದೂರು ಸೇತುವೆಗಾಗಿ ಬಿಎಸ್ ಯಡಿಯೂರಪ್ಪನವರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬರೆದಿರುವ ಪತ್ರ ವೈರಲ್

On: July 13, 2025 12:34 PM
Follow Us:
---Advertisement---

ಸಾಗರ : ನಾಡಿನ ಜನರು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಅಂಬಾರಗೋಡ್ಲು  ಕಳಸವಳ್ಳಿ ಸೇತುವೆ ಜುಲೈ 14 ರಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಯಾಗುತ್ತಿದೆ.

ನೂತನ ಸೇತುವೆ ಉದ್ಘಾಟನೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಗುದ್ದಾಟಕ್ಕೂ ಕಾರಣವಾಗಿದೆ. ಇವೆಲ್ಲರ ನಡುವೆ ಈಗ ಶಾಸಕ ಗೋಪಾಲಕೃಷ್ಣ ಬೇಳೂರು ಬಿಎಸ್ ಯಡಿಯೂರಪ್ಪನವರಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.beluru MLA

ಶಾಸಕ ಗೋಪಾಲಕೃಷ್ಣ ಬೇಳೂರು ಬಿಎಸ್ ಯಡಿಯೂರಪ್ಪನವರಿಗೆ ಬರೆಯುವ ಪತ್ರದ ವಿಶೇಷತೆಗಳೇನು?

 ಲಿಂಗನಮಕ್ಕಿ ಆಣೆಕಟ್ಟ ನಿರ್ಮಾಣದಿಂದಾಗಿ ಶರವತಿ ನದಿ ಹಿನ್ನಿರ ಪರಿಣಾಮ ಸಾಗರ ತಾಲ್ಲೂಕಿನ ತುಮರಿ, ಕುದರೂರು, ಶಂಕಣ್ಣ ಶ್ಯಾನುಭೋಗ್, ಚೆನ್ನಗೊಂಡ ಹಾಗೂ ಬಾನಕೋಳಿ ಹೀಗೆ ಒಟ್ಟು ಐದು ಗ್ರಾಮ ಪಂಚಾಯಿತಿಗಳ ಸುಮಾರು 20 ಸಾವಿರ ಜನರು ತಾಲೂಕು ಕೇಂದ್ರದಿಂದ ಸಂಪರ್ಕ ಕಳೆದುಕೊಂಡು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿರುವುದು ತಮಗೆ ತಿಳಿದ ವಿಷಯವಾಗಿದೆ. ಇದೇ ಭಾಗದಲ್ಲಿ ಬರುವ ಶ್ರೀ ಸಿಗಂದೂರು ಕ್ಷೇತ್ರ ಹಾಗೂ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಲಕ್ಷಾಂತರ ಜನರು ಭೇಟಿ ನೀಡುತ್ತಾ ಇರುತ್ತಾರೆ.

ಈ ಹಿನ್ನೆಲೆಯಲ್ಲಿ ಈ ಭಾಗದ ಜನರ ಸಮಸ್ಯೆಗಳನ್ನು ಅರಿತಿರುವ ತಾವುಗಳು ಸದರಿ ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ನಿರ್ಮಾಣಕ್ಕಾಗಿ ಈ ಸಾಲಿನ ಕರ್ನಾಟಕ ಸರ್ಕಾರದ ಬಜೆಟ್ ನಲ್ಲಿ 100 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದರು.letter

ಬೇಳೂರು ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ವರ್ಷದ ಕಾಮಗಾರಿಯಲ್ಲಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮಂಜುನಾಥ ಕಾಮಗಾರಿ ಕೈಗೊಳ್ಳುವುದಾಗಿ ಪತ್ರದಲ್ಲಿ ತಿಳಿಸಿದ್ದರು.

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಆನಂದಪುರದ ವಿದ್ಯುತ್ ವಿತರಣಾ ಕೇಂದ್ರ ತುರ್ತು ನಿರ್ವಹಣೆ – ವಿದ್ಯುತ್ ವ್ಯತ್ಯಯ – Anandapura Power Distribution center emergency management – power outage

ಸಾಗರವನ್ನು ಜಿಲ್ಲೆಯನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಶಾಸಕ ಗೋಪಾಲಕೃಷ್ಣ ಬೇಳೂರು MLA Gopalakrishna Belur wrote a letter to chief minister siddaramaiah to make Sagara taluk a district.

ಅಕ್ರಮ ದನ ಸಾಗಾಟ – ಇಬ್ಬರ ಬಂಧನ – ಗೋವುಗಳ ರಕ್ಷಣೆ Illegal cattle smuggling – TWo arrested – Cow protection

ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ Date set for Kadlehanklu Marikamba Devi’s festival

ಉತ್ತಮ ಸಮಾಜ ಕಟ್ಟಲು ಯುವ ಪಿಳಿಗೆ ಸದೃಢರಾಗಬೇಕು -ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ -The younger generation must become strong to build a better society

ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಪ್ರಕರಣ – ಆರೋಪಿಗಳ ಪರವಾಗಿ ಬಂದ ತೀರ್ಪು – Police station assault case – verdict in favor of the accused

Leave a Comment