ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಅಧಿಕಾರಿಗಳು ಒತ್ತಡಕ್ಕೆ ಮಣಿಯದೆ ಸಿಗಂದೂರು ಸೇತುವೆ ಉದ್ಘಾಟನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ವಿಶೇಷ ಆಹ್ವಾನಿತರಾಗಿ ಆಹ್ವಾನಿಸಬೇಕು

On: July 13, 2025 3:51 PM
Follow Us:
---Advertisement---

ಸಾಗರ : ಅಧಿಕಾರಿಗಳು ಒತ್ತಡಕ್ಕೆ ಮಣಿಯದೆ ಸಿಗಂದೂರು ಸೇತುವೆ ಉದ್ಘಾಟನೆಗೆ ಮಾಜಿ ಸಚಿವ ಹರತಾಳು ಹಾಲಪ್ಪರವನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸಬೇಕು ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ  ಹಾಗೂ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು ಮನವಿ ಮಾಡಿದ್ದಾರೆ.

ಜನರ ಬಹುದಿನದ ಕನಸಾದ ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ಜುಲೈ 14 ರಂದು (ನಾಳೆ) ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯವಾಗಿದೆ. ಅಧಿಕಾರಿಗಳು ಪ್ರೋಟೋಕಾಲ್ ಪ್ರಕಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಾಯಕರುಗಳಿಗೆ ಆಹ್ವಾನ ನೀಡಿದ್ದಾರೆ.20250713 163707

ಆದರೆ ಸೇತುವೆ ನಿರ್ಮಾಣ ಆಗುವಲ್ಲಿ 3 ಬಾರಿ ಶಾಸಕರಾಗಿ ಆಯ್ಕೆಯಾದ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಶ್ರಮವು ಸಹ ಇದೆ. ಹಿಂದೆ ದೋಣಿ ದುರಂತದಲ್ಲಿ ಸುಮಾರು 22 ಜನ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸೇತುವೆ ನಿರ್ಮಾಣ ಆಗಲೇ ಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಹಾಗೂ ಯಡಿಯೂರಪ್ಪ ಜೊತೆ ನಿರಂತರ ಚರ್ಚೆ ಹೋರಾಟದ ಫಲವಾಗಿ ಸೇತುವೆಯಾಗಿ ತಲೆಎತ್ತಿ ನಿಂತಿದೆ.

ಇದಲ್ಲದೆ ಸೇತುವೆ ನಿರ್ಮಾಣವಾಗಲು ಕೆಪಿಸಿಯಿಂದ NOC ಪತ್ರ ಬೇಕಾಗಿತ್ತು. ಪತ್ರ ಪಡೆಯಲು ಶಕ್ತಿ ಭವನದ ಎದುರು ಏಕಾಂಗಿ ಹೋರಾಟ ಮಾಡಿದ ಪರಿಣಾಮವಾಗಿ ಎಂ.ಡಿ  NOC ನೀಡಿದ್ದರು. ಇವೆಲ್ಲ ಹೋರಾಟಗಳನ್ನು ಪರಿಗಣಿಸಿ ಪ್ರೋಟೋಕಾಲ್  ಪ್ರಕಾರ ಆಹ್ವಾನ ನೀಡದಿದ್ದರೂ ವಿಶೇಷ ಆಹ್ವಾನಿತರಾಗಿ  ಗೌರವಿತವಾಗಿ ಯಾರದೇ ಒತ್ತಡಕ್ಕೆ ಮಣಿಯದೆ ಅಧಿಕಾರಿಗಳು ಅವರನ್ನು ಆಹ್ವಾನಿಸಬೇಕು  ಎಂದು ಮನವಿ ಮಾಡಿದರು.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment