ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಶಿಕ್ಷಣದಲ್ಲಿ ಕ್ರಾಂತಿಕಾರಿ ಬೆಳವಣಿಗೆಯತ್ತ ಭಾರತ – ಶಾಸಕ ಗೋಪಾಲಕೃಷ್ಣ ಬೇಳೂರು India towards revolutionary development in education – MLA Gopalakrishna Belur

On: July 25, 2025 1:18 PM
Follow Us:
---Advertisement---

ಸಾಗರ : ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ವಾತಾವರಣ ಕಲ್ಪಿಸಿದಾಗ ದೇಶವು ಪ್ರಗತಿ ಕಾಣಲು ಸಾಧ್ಯವಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಅವರು ತಾಲ್ಲೂಕಿನ ನಂದಿತಳೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ವಿವಿಧ ಶಾಲೆಗಳಿಗೆ ಧರ್ಮಾರ್ಥ ನಿಧಿಯಿಂದ ಅನುದಾನ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.MLA

ದೇಶದಲ್ಲಿ ಉತ್ತಮ ಶಿಕ್ಷಣ ದೊರೆಯುವ ಮೂಲಕ ಶೈಕ್ಷಣಿಕ ಕ್ರಾಂತಿ ಆಗುತ್ತಿದೆ. ಶೈಕ್ಷಣಿಕ ಕ್ರಾಂತಿ ಇನ್ನಷ್ಟು ಆಗಬೇಕಾದರೆ ಸಾರ್ವಜನಿಕ ವಲಯದ ಸಹಕಾರ  ಅತ್ಯಗತ್ಯವಾಗಿದೆ.

ನಾನು ಡಿಸಿಸಿ ಬ್ಯಾಂಕ್ ನಿರ್ದೇಶಕನಾದ ಮೇಲೆ ಸಹಕಾರ ಸಂಘಗಳ ಸಾಧಕ ಬಾದಕಗಳು ತಿಳಿಯುತ್ತಿದೆ. ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ.

ರೈತರು ಕಡಿಮೆ ಬಡ್ಡಿದರ, ಸುಲಭ ಸಾಲದ ದೊರಕುವ ಸಹಕಾರಿ ಸಂಘಗಳತ್ತ ಮುಖ ಮಾಡಬೇಕು ಎಂದು ಕರೆ ನೀಡಿದರು. ಕೇಂದ್ರದ ನಬಾರ್ಡ್ ಬ್ಯಾಂಕಿನಿಂದ 200 ಕೋಟಿ ಹಣ ಬರದಿದ್ದರೂ ಸಹ ರೈತರಿಗೆ ಯಾವುದೇ ತೊಂದರೆ ಇಲ್ಲದೆ ಸಾಲವನ್ನು ವಿತರಿಸಲಾಗಿದೆ. 200 ಕೋಟಿ ಹಣ ಬಂದಿದ್ದರೆ ರೈತರಿಗೆ ಇನ್ನಷ್ಟು ಅನುಕೂಲವಾಗುತ್ತಿತ್ತು ಎಂದು ಹೇಳಿದರು.

ಮಲೆನಾಡು ಜನರ ಬಹುಬೆಡಿಕೆಯಾದ ಕಾಲು ಸಂಕ ಸಮಸ್ಯೆ ನಿವಾರಿಸಲಾಗುತ್ತಿದೆ. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ 234 ಕಾಲು ಸಂಕಗಳು ಮಂಜೂರಾಗಿರೋದು ವಿಶೇಷವಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸಹಕಾರದಿಂದ ಕಾಲು ಸಂಕ ತಡೆಗೋಡೆಗಳಿಗೆ ಅನುದಾನ ಮಂಜೂರಾಗಿದೆ ಎಂದು ಹೇಳಿದರು.

ರೈತರು ಇನ್ನು ಮುಂದೆ ಯಾವುದೇ ಕಾರಣಕ್ಕೂ ಹೊಸದಾಗಿ ಅರಣ್ಯ ಒತ್ತುವರಿ ಕೆಲಸವನ್ನು ಮಾಡಬೇಡಿ. ಅರಣ್ಯ ಕಾನೂನು ಕಠಿಣವಾಗಿದೆ ಎಂದು ಎಚ್ಚರಿಕೆ ನೀಡಿದರು.

 

ನಂದಿತಳೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 18 ಸರ್ಕಾರಿ ಶಾಲೆಗಳಿಗೆ ಧರ್ಮಾರ್ಥ ನಿಧಿಯಿಂದ ಶಾಲೆಗಳಿಗೆ ಬೇಕಾದಂತಹ ಕಬ್ಬಿಣದ ಡೆಸ್ಕ್, ಟೇಬಲ್, ಕುರ್ಚಿ, ಕಲಿಕಾ ಸಾಧನ, ವಾಟರ್ ಫಿಲ್ಟರ್, ಪ್ರಿಂಟರ್, ಎಲ್ಇಡಿ ಟಿವಿ ಇನ್ನಿತರ ಕೊಡುಗೆಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಗುರುಮೂರ್ತಿ ಎ,  ನಿರ್ದೇಶಕರುಗಳಾದ ನಾಗರಾಜ್, ದುರ್ಗಪ್ಪ, ಶರತ್ ನಾಗಪ್ಪ, ದಿನೇಶ್ ಎನ್, ಎಂ ಎಸ್ ವೇದಾಂತಪ್ಪ, ದೇವರಾಜ್ ಟಿ, ಮೇಘರಾಜ್, ನಾಗರಾಜ್, ಜಯಲಕ್ಷ್ಮಿ, ಕೃಷ್ಣವೇಣಿ, ಕ್ಷೇತ್ರಧಿಕಾರಿಗಳಾದ ಲೋಕೇಶ್ ಇನ್ನಿತರರು ಉಪಸ್ಥಿತರಿದ್ದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment