ಸಾಗರ : ಸಾಗರ ತಾಲ್ಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಎಲ್ಲಾ ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅನ್ವಯಿಸಿ 26/7/2025 ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಸದರಿ ರಜೆ ದಿನದಂದು ನಡೆಯಬೇಕಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶ ಹೊರಡಿಸಿದ್ದಾರೆ.