ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಎಲ್ಲೆಡೆ ಸಡಗರ ಸಂಭ್ರಮದ ನಾಗರಪಂಚಮಿ

On: July 29, 2025 9:53 AM
Follow Us:
---Advertisement---

ಸಾಗರ : ತಾಲೂಕಿನ ಎಲ್ಲೆಡೆ ನಾಗರ ಪಂಚಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ನಾಗರ ಪಂಚಮಿ ಹಬ್ಬವನ್ನು ಭಕ್ತರು ವಿಶೇಷವಾಗಿ  ಆಚರಿಸಿಕೊಂಡು ಬರುತ್ತಿದ್ದಾರೆ. ನಾಗರ ಪಂಚಮಿ ಹಬ್ಬದ ದಿನ  ನಾಗರ ಬನ ನಾಗದೇವರ ವಿಗ್ರಹಗಳಿಗೆ ಹಾಲು ಹಣ್ಣು ಹೂಗಳನ್ನು ಅರ್ಪಿಸಲಾಗುತ್ತದೆ.

festival nagara panchami

ಆನಂದಪುರದ ಕೆಇಬಿಯಲ್ಲಿ ನಾಗರ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಬಂಧ ಗಟ್ಟಿಗೊಳಿಸುವ ನಾಗರಪಂಚಮಿ

ನಾಗರ ಪಂಚಮಿ ಹಬ್ಬವನ್ನು ಅಣ್ಣ ತಂಗಿಯರ, ಹೆಣ್ಣು ಮಕ್ಕಳ ಹಬ್ಬವೆಂದು ಸಹ ಕರೆಯಲಾಗುತ್ತದೆ. ವಿಶೇಷವಾಗಿ ಹೆಣ್ಣು ಮಕ್ಕಳು ಅತಿ ಸಡಗರ ಸಂಭ್ರಮದಿಂದ ಆಚರಿಸುವ ಹಬ್ಬವು ಆಗಿದೆ. ನಾಗರ ಪಂಚಮಿ ಸಂಬಂಧವನ್ನು ಗಟ್ಟಿಗೊಳಿಸುವ ಹಬ್ಬವೆಂದೇ ಎಂದು ಹೇಳಬಹುದು. ನಾಗರ ಪಂಚಮಿಯನ್ನು ಆಚರಿಸುವ ಹೆಣ್ಣು ಮಕ್ಕಳಿಗೆ ಸಹೋದರ ರೂಪದಿಂದ ನಾಗರಕ್ಷಣೆ ಒದಗಿಸುತ್ತಾನೆ ಎಂಬ ಪ್ರತೀತಿ ಸಹ ಇದೆ.nagara panchami 1

ಆನಂದಪುರದ ಅರಳಿಕಟ್ಟೆಯಲ್ಲಿ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಯಿತು.

ಭಾರತೀಯ ಸಂಸ್ಕೃತಿಯ ವಿಶೇಷತೆ ಪ್ರತಿಬಿಂಬಿಸುವ ನಾಗರ ಪಂಚಮಿ

ಭಾರತೀಯ ಸಂಸ್ಕೃತಿಯ ವಿಶೇಷತೆ ಪ್ರತಿಬಿಂಬಿಸುವ ಅನೇಕ ಹಬ್ಬಗಳ ಪೈಕಿ ನಾಗರಪಂಚಮಿ ಒಂದು ವಿಶಿಷ್ಟವಾದ ಹಬ್ಬವಾಗಿದೆ. ದೇಶದ ವಿವಿಧ ಭಾಗಗಳಲ್ಲಿ ವಿಭಿನ್ನ ರೀತಿಯ ಆಚರಣೆಗಳೊಂದಿಗೆ ಮಹತ್ವಪೂರ್ಣತೆ ಪಡೆದುಕೊಂಡಿದೆ.yadehalli 1 scaled

ಗೇರುಬೀಸು ಗ್ರಾಮದಲ್ಲಿ ಸಡಗರದ ನಾಗರ ಪಂಚಮಿ

ಈ ಹಬ್ಬವು ಮಾನವ ಮತ್ತು ಪ್ರಕೃತಿ ನಡುವಿನ ನಿಕಟ ಸಂಬಂಧವನ್ನು ಸೂಚಿಸುತ್ತದೆ. ನಾಗರ ಪಂಚಮಿ ಪ್ರಕೃತಿಯಲ್ಲಿರುವ ಎಲ್ಲಾ ಜೀವಿಗಳ ಪರಸ್ಪರ ಸಂಬಂಧದ ಸ್ವರೂಪ ಮತ್ತು ಸಾಮರಸ್ಯದಿಂದ ಸಹಬಾಳ್ವೆ ನಡೆಸುವ ಮಹತ್ವವನ್ನು ಸಾರುವ ವಿಶೇಷ ಹಬ್ಬವಾಗಿದೆ.

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment