ಸಾಗರ : ತಾಲ್ಲೂಕಿನ ಆನಂದಪುರ ಪಟ್ಟಣದಲ್ಲಿ ಮಂಗಳವಾರ ಸಂಜೆ ಪೋಲಿಸರಿಂದ ರೂಟ್ ಮಾರ್ಚ್ ನಡೆಸಲಾಯಿತು.
ಗಣೇಶ ಹಬ್ಬ ಹಾಗೂ ಈದ್ -ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.
ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ರೂಟ್ ಮಾರ್ಚ್ ಮಾಡುವ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿದರು.
ಆನಂದಪುರದ ಬಸ್ ನಿಲ್ದಾಣದಿಂದ ಆರಂಭವಾದ ರೂಟ್ ಮಾರ್ಚ್ ನಲ್ಲಿ ಪೊಲೀಸ್, RAF, SAF , ತಂಡ ಭಾಗವಹಿಸಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಿದ ರೂಟ್ ಮಾರ್ಚ್ ಯಡೇಹಳ್ಳಿ ವೃತ್ತದಲ್ಲಿ ಮುಕ್ತಾಯಗೊಂಡಿತು.
ಆನಂದಪುರದ ಪಿಎಸ್ಐ ಪ್ರವೀಣ್ ನೇತೃತ್ವದಲ್ಲಿ ನಡೆದ ರೂಟ್ ಮಾರ್ಚ್ ನಲ್ಲಿ RAF Major ಆರ್.ಎಸ್ ಬೀಸ್ಟ್, ಹಾಗೂ SAF ಇನ್ಸ್ಪೆಕ್ಟರ್ ಕೀರ್ತಿ ಕುಮಾರ್ ಭಾಗವಹಿಸಿದ್ದರು.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇👇