ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 13 ನೇ ಸಂಸ್ಥಾಪನಾ ದಿನಾಚರಣೆ – Keladi Shivappa Nayaka University of Agriculture and Horticulture 13th Foundation Day

On: September 19, 2025 8:25 AM
Follow Us:
---Advertisement---

ಸಾಗರ : ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಸಂಸ್ಥಾಪನಾ ದಿನಾಚರಣೆ ಸೆ.23 ರಂದು ನಡೆಯಲಿದೆ.

 

13 ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ನೆರವೇರಿಸಲಿದ್ದಾರೆ.agriculture University

 

ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಪ್ರಶಸ್ತಿ ವಿತರಣೆ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್‌.ಸಿ ಜಗದೀಶ್ ವಹಿಸಲಿದ್ದಾರೆ.

 

ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳಾದ ತರೀಕೆರೆಯ ಶಾಸಕರಾದ ಜಿ.ಎಚ್ ಶ್ರೀನಿವಾಸ್, ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಶಮ್ಲಾ ಇಕ್ಬಾಲ್, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಯೋಜನಾ ಸಂಯೋಜಕರಾದ ಪ್ರಕಾಶ್ ಪಾಟೀಲ್, ಶಿಕ್ಷಣ ತಜ್ಞರಾದ ಪಿ.ಕೆ ಬಸವರಾಜ್, ಕೃಷಿ ಉದ್ದಿಮೆದಾರರಾದ ಬಿ. ಕೆ ಕುಮಾರಸ್ವಾಮಿ, ಪ್ರಗತಿಪರ ರೈತರಾದ ಜೆ.ಜಿ ಕಾವೇರಿಯಪ್ಪ, ಎಚ್.ಡಿ ದೇವಿ ಕುಮಾರ್, ಎಚ್.ಎಸ್ ಶಶಾಂಕ್, ಮೂಡಿಗೆರೆ ತೋಟಗಾರಿಕೆ ವಿಶ್ವವಿದ್ಯಾಲಯದ ಶ್ರೀನಿವಾಸ್. ವಿ ಅವರು ಭಾಗವಹಿಸಲಿದ್ದಾರೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲ ಸಚಿವರಾದ ಡಾಕ್ಟರ್ ಕೆ.ಸಿ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment