ನಟ, ಹಿರಿಯ ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ನಿಧನ:
ಉತ್ತರ ಕರ್ನಾಟಕದ ಹಿರಿಯ ಕಲಾವಿದ ಮತ್ತು ಹಾಸ್ಯ ನಟ ರಾಜು ತಾಳಿಕೋಟೆ ಅವರು ಅಕ್ಟೋಬರ್ 13 ರಂದು ಹೃದಯಘಾತದಿಂದ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದ ಮೂಲದವರಾಗಿದ್ದಾರೆ.
ಅಕ್ಟೋಬರ್ 12ರಂದು ಸಂಭವಿಸಿದ ಹೃದಯಾಘಾತದಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಅಕ್ಟೋಬರ್ 13ರಂದು ನಿಧನರಾಗಿದ್ದಾರೆ.
ಕನ್ನಡ ಚಲನಚಿತ್ರ ರಂಗದಲ್ಲಿ ಮನಸಾರೆ, ಪಂಚರಂಗಿ ಪರಮಾತ್ಮ, ಸೇರಿದಂತೆ 35ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದ ಇವರು ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರು.










