ಸಾಗರ : ತಾಲ್ಲೂಕಿನ ಆನಂದಪುರದ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕವನ್ನು ಜಾತ್ರಾ ಸಮಿತಿ ನಿಗದಿಪಡಿಸಿದೆ.
ಆನಂದಪುರದ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಡಿ.18 ರಂದು ನಡೆದ ಸಭೆಯಲ್ಲಿ ಜಾತ್ರಾ ಸಮಿತಿಯು ದಿನಾಂಕ ನಿಗದಿಪಡಿಸಿದೆ.
ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಇಲ್ಲಿನ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರೆಯು ಮಾರ್ಚ್ 10 ರಿಂದ ಮಾರ್ಚ್ 16 ರವರೆಗೆ ನಡೆಯಲಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ಡಿಸೆಂಬರ್ 23ರಂದು ಮರ ಕಡಿಯುವ ಶಾಸ್ತ್ರವನ್ನು ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಬದಲಾದ ಜಾತ್ರಾ ಮಹೋತ್ಸವದ ದಿನಾಂಕ
ಆನಂದಪುರದ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಫೆಬ್ರವರಿ 24 ರಿಂದ ಮಾರ್ಚ್ 2 ವರೆಗೆ ನಿಗದಿಯಾಗಿತ್ತು. ಸಾಗರ ಶಿರಸಿ ಸೇರಿದಂತೆ ವಿವಿಧ ಕಡೆ ಜಾತ್ರೆಗಳು ನಡೆಯುತ್ತಿರುವ ಕಾರಣದಿಂದಾಗಿ ಜಾತ್ರಾ ದಿನಾಂಕವನ್ನು ಬದಲು ಮಾಡಿ ಮಾರ್ಚ್ 10 ರಿಂದ ಮಾರ್ಚ್ 16 ರವರೆಗೆ ಜಾತ್ರೆ ನಡೆಸಲು ತೀರ್ಮಾನಿಸಲಾಯಿತು.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇





