ಸಾಗರ : ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಮಾ. 10 ರಿಂದ ಮಾರ್ಚ್ 16 ರವರೆಗೆ ನಡೆಯಲಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ಸಮಿತಿಯ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಮಾಡುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಲಾಯಿತು.
ಜಾತ್ರಾ ಸಮಿತಿಯ ಅಧ್ಯಕ್ಷ ವೆಂಕಟೇಶ್ ಹಾಗೂ ಆನಂದಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಗುರುರಾಜ್ ಮಾತನಾಡಿ, ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರೆಯು ಅದ್ದೂರಿಯಾಗಿ ನಡೆಯಲಿದ್ದು, ಭಕ್ತರು ತನು, ಮನ, ಧನ ಸಹಾಯ ಮಾಡಬೇಕು ಎಂದು ಮನವಿ ಮಾಡಿದರು.
ಮಾರಿಕಾಂಬಾ ದೇವಿಯ ತವರು ಮನೆಯ ಶಿಲಾಮಯ ದೇವಸ್ಥಾನ ನಿರ್ಮಾಣ ಕಾರ್ಯ ಸಹ ಭರದಿಂದ ಸಾಗಿದ್ದು, ಹೆಚ್ಚಿನ ಸಹಕಾರ ನೀಡಬೇಕು ಎಂದು ಕೋರಿದರು.
ಹರಾಜು ಪ್ರಕ್ರಿಯೆಗೆ ಆಹ್ವಾನ
ಮಾ.10 ರಿಂದ ಆರಂಭವಾಗುವ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಜನವರಿ 12ರಂದು ಜಾತ್ರಾ ಸಮಿತಿ ವತಿಯಿಂದ ಹರಾಜು ಪ್ರಕ್ರಿಯೆಗೆ ಜರುಗಲಿದೆ ಎಂದು ಜಾತ್ರಾ ಸಮಿತಿಯ ಸದಸ್ಯ ರವಿಕುಮಾರ್ ಯಡೇಹಳ್ಳಿ ಕರೆ ನೀಡಿದರು.
ದೀಪಾಲಂಕಾರ, ಅಂಗಡಿ ಮಳಿಗೆಗಳು ಡೆಕೋರೇಷನ್, ಅಮ್ಯೂಸ್ಮೆಂಟ್ ಸೇರಿದಂತೆ ವಿವಿಧ ಹರಾಜುಗಳಿಗೆ ಜನವರಿ 12ರಂದು ಭಾಗವಹಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಜಯಪ್ಪ ಗೌಡ್ರು, ವೇಣಾಕ್ಷ, ನಾರಿ ಲೋಕಪ್ಪ, ರಾಜು ದೇವಾಡಿಗ, ಗೌರವಾಧ್ಯಕ್ಷ ರಾಜೇಂದ್ರ ಗೌಡ್ರು ಹಾಗೂ ಜಾತ್ರಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇





