ಸಾಗರ: ತಾಲ್ಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಕೋಟೆಕೊಪ್ಪ ಗ್ರಾಮದ ನಿವಾಸಿ ರಮೇಶ್ (55) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ರಮೇಶ್ ಅವರು ಶಿಕಾರಿಪುರದಿಂದ ತಮ್ಮ ಊರಿಗೆ ಬರುತ್ತಿದ್ದ ಸಮಯದಲ್ಲಿ ಬೈರಾಪುರ ಗ್ರಾಮದ ಬಳಿ ನಿಯಂತ್ರಣ ತಪ್ಪಿ , ಪಕ್ಕದಲ್ಲಿಯೇ ಇದ್ದ ನಾಮಫಲಕ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಆನಂದಪುರ ಪೊಲೀಸ್ ಠಾಣೆ ಪಿಎಸ್ಐ ಪ್ರವೀಣ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





