ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಬಂಗಾರ ಕದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು. Villagers caught the thief who stole the gold and handed him over to the police.

On: March 19, 2026 1:48 PM
Follow Us:
---Advertisement---

ಸಾಗರ : ಬಂಗಾರ ಕದ್ದು ಓಡಿ ಹೋಗಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಬ್ರಾಹ್ಮಣ ಮಂಚಾಲೆ ಗ್ರಾಮಸ್ಥರು ಯಶಸ್ವಿಯಾಗಿದ್ದಾರೆ.

ಫೆ.19 ರಂದು ಬ್ರಾಹ್ಮಣ ಮಂಚಾಲೆ ಗ್ರಾಮದ ನಾಗರತ್ನಮ್ಮ ಎಂಬುವರ ಮನೆಯ ಬಾಗಿಲು ಮುರಿದು 70 ಸಾವಿರ ಬಂಗಾರ ಸೇರಿದಂತೆ ವಿವಿಧ ವಸ್ತುಗಳನ್ನು ಕಳ್ಳತನ ಮಾಡಿದ್ದರು. ಈ ವಿಷಯವಾಗಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಮಾ.18 ರಂದು ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ಮತ್ತೊಮ್ಮೆ ಕಳ್ಳತನ ಮಾಡಲು ಹೊಂಚು ಹಾಕಿದ್ದಾರೆ. ಅಪರಿಚಿತ ವ್ಯಕ್ತಿಯನ್ನು ಕಂಡು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಯು ಹೊಸನಗರ ತಾಲ್ಲೂಕಿನ ಕಣ ಬಂದೂರು ಗ್ರಾಮದ ಸಂತೋಷ್ ಕುಮಾರ್ ಎಂದು ಗುರುತಿಸಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದಾಗ ಈತನೇ ಫೆ.19 ರಂದು ಬ್ರಾಹ್ಮಣ ಮಂಚಾಲೆ ಗ್ರಾಮದ ನಾಗರತ್ನಮ್ಮ ಎಂಬವರ ಮನೆ ಬಾಗಿಲು ಮುರಿದು ಬಂಗಾರ ಕದ್ದ ಕಳ್ಳನಾಗಿದ್ದಾನೆ.

ಬಂಧಿತ ಆರೋಪಿಯಿಂದ 12.21 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment