ಸಾಗರ : ಅಡಿಕೆ ತೋಟದಲ್ಲಿ ಕೆಲಸ ನಿರ್ವಹಿಸುವಾಗ ಆಕಸ್ಮಿಕವಾಗಿ ವಿದ್ಯುತ್ ವೈರ್ ಕಾಲಿಗೆ ತಗುಲಿ ರೈತನೂರ್ವ ಮೃತಪಟ್ಟ ಘಟನೆ ತಾಲ್ಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ.
ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಮರಾಠಿ ಸುರೇಶ್ (49) ವಿದ್ಯುತ್ ಶಾಕ್ ನಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇವರ ಅಡಿಕೆ ತೋಟದಲ್ಲಿ ನೀರು ಬಿಡಲು ಹೋದ ಸಂದರ್ಭದಲ್ಲಿ ಕೊಳವೆ ಬಾವಿಗೆ ಎಳೆದಿದ್ದ ವೈರ್ ಸ್ಕಿನ್ ಆದ ಹಿನ್ನೆಲೆಯಲ್ಲಿ, ಆಕಸ್ಮಿಕವಾಗಿ ಕಾಲಿಗೆ ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅವರ ಮಗ ರಾಕೇಶ್ ತಂದೆಯವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





