ಶಿವಮೊಗ್ಗ : ಮರಕ್ಕೆ ಕಾರು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂರು ತುಂಡಾಗಿರುವ ಘಟನೆ ಶಿವಮೊಗ್ಗದ ಸಮೀಪದ ಹರಿಗೆ ಬಳಿ ನಡೆದಿದೆ.
ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಶಿವಮೊಗ್ಗದ ಸೀಗೆಹಟ್ಟಿ ನಿವಾಸಿ ಗುರುರಾಜ್ (22) ಎಂದು ಗುರುತಿಸಲಾಗಿದೆ.
ಶಿವಮೊಗ್ಗದಿಂದ ಭದ್ರಾವತಿ ಕಡೆ ಹೋಗುವಾಗ ಬೆಳಗಿನ ಜಾವ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಮೂರು ತುಂಡಾಗಿದೆ.





