ಸಾಗರ : ತಾಲೂಕಿನ ಸಮೀಪದ ಆನಂದಪುರ ಹೋಬಳಿಯ ಮುಂಬಾಳು ಗ್ರಾಮದಲ್ಲಿ ಬಸ್ ಹಾಗೂ ಕಾರಿನ ಅಪಘಾತವಾಗಿದೆ.
ಶಿವಮೊಗ್ಗದಿಂದ ಸಾಗರದ ಕಡೆ ಹೋಗುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ನಡುವೆ ಮುಂಬಾಳು ಗ್ರಾಮದ ಕೆರೆ ಏರಿ ಮೇಲೆ ಅಪಘಾತವಾಗಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಬಹುತೇಕ ಜಖಂಗೊಂಡಿದೆ.
ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಕಾರಿನಲ್ಲಿದ್ದ ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಲಾಗಿದೆ.
ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆನಂದಪುರದ ಒನಂಟು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





