ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಆನಂದಪುರ : ಸಂಭ್ರಮದ ಲಕ್ಷ್ಮೀರಂಗನಾಥ ಸ್ವಾಮಿ ರಥೋತ್ಸವ. A festive Lakshmi Ranganath Swamy chariot festival.

On: January 26, 2026 10:07 AM
Follow Us:
---Advertisement---

ಆನಂದಪುರ : ಇಲ್ಲಿನ ಇತಿಹಾಸ ಪ್ರಸಿದ್ಧ ಲಕ್ಷ್ಮೀರಂಗನಾಥ ಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ರಥಸಪ್ತಮಿ ಎಂದು ನಡೆಯುವ ರಂಗನಾಥ ಸ್ವಾಮಿ ರಥೋತ್ಸವಕ್ಕೆ ಆನಂದಪುರ ಹಾಗೂ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳಿಂದ ಭಕ್ತರು ಬಂದು ಹಣ್ಣು ಕಾಯಿ ಸಮರ್ಪಿಸಿ ಪೂಜೆ ಸಲ್ಲಿಸುತ್ತಾರೆ.Ranganath temple

ಲಕ್ಷ್ಮೀರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ರಥಕ್ಕೆ ಪೂಜೆ ಮಾಡಲಾಗುತ್ತದೆ. ನಡೆದುಕೊಂಡು ಬಂದ ಸಾಂಪ್ರದಾಯದಂತೆ ಬೆಳಂದೂರು ಹಾಗೂ ಮಲವಗೊಪ್ಪ ಕುಟುಂಬದವರು ಮೊದಲ ಪೂಜೆ ಸಲ್ಲಿಸುತ್ತಾರೆ. ರಾಜಸ್ವ ನಿರೀಕ್ಷಕರಾದ ಕವಿರಾಜ್ ಅವರು ಪೂಜೆ ಸಲ್ಲಿಸಿದ ನಂತರ ಸ್ವಾಮಿಯ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಲಾಯಿತು.

ರಾಜಬೀದಿ ಉತ್ಸವವು ಆನಂದಪುರದ ಪ್ರಮುಖ ಬೀದಿಯಲ್ಲಿ ಅದ್ದೂರಿಯಾಗಿ ನಡೆಯಿತು. ಭಕ್ತರು ಮನೆಯ ಮುಂದೆ ರಂಗೋಲಿ ಬಿಡಿಸಿ ದೇವರನ್ನು ಸ್ವಾಗತಿಸಿ ಹಣ್ಣು ಕಾಯಿ ಸಮರ್ಪಿಸಿದರು. ರಥೋತ್ಸವದ ಜೊತೆಗೆ ವಾದ್ಯ ಚೆಂಡೆ ಅಕರ್ಷಣೆಯ ಕೇಂದ್ರ ಬಿಂದು ಆಗಿತ್ತು. ಸ್ವಾಮಿಯ ರಥೋತ್ಸವದ ದಾರಿ ಉದ್ದಕ್ಕೂ ಭಕ್ತರು ಪಾನಕದ ವ್ಯವಸ್ಥೆ ಮಾಡಿದ್ದರು. ನಂತರ ಬಂದಂತಹ ಭಕ್ತರಿಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment