ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಧರ್ಮಸ್ಥಳದ ವಿರುದ್ಧದ ಸುಳ್ಳು ಆರೋಪ ಖಂಡನೀಯ – ವಿಧಾನ ಪರಿಷತ್ ಶಾಸಕ ಡಿ.ಎಸ್ ಅರುಣ್ – False allegations against Dharmasthala are condemnable legislative council MLA D S Arun

On: August 11, 2025 4:02 PM
Follow Us:
---Advertisement---

ಶಿವಮೊಗ್ಗ : ಧರ್ಮಸ್ಥಳ ವಿರುದ್ಧದ ಸುಳ್ಳು ಆರೋಪ ಮಾಡುತ್ತಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್ ಅರುಣ್ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ಆರಂಭವಾದ ಅಧಿವೇಶನದ ಮೊದಲ ದಿನವೇ ಧರ್ಮಸ್ಥಳದ ಪ್ರಕರಣ ಕುರಿತು ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಾಡಿದರು.D S ARUN 1

ರಾಜ್ಯದ ಧಾರ್ಮಿಕ ಹೆಮ್ಮೆ ಮತ್ತು ಲಕ್ಷಾಂತರ ಹಿಂದೂ ಭಕ್ತರ ಭಾವನೆಯ ಕೇಂದ್ರವಾಗಿರುವ ಧರ್ಮಸ್ಥಳದ ವಿರುದ್ಧ ಯಾವುದೇ ದೃಢವಾದ ಸಾಕ್ಷಿವಿಲ್ಲದೆ ಅನಾಮಿಕ ವ್ಯಕ್ತಿ ಮಾಡಿದ ಆರೋಪವನ್ನು ತೀವ್ರವಾಗಿ ಖಂಡಿಸಿದರು.

ಇಂತಹ ಸುಳ್ಳು ಮತ್ತು ಉದ್ದೇಶಪೂರಿತ ಆರೋಪಗಳಿಂದ ಸನಾತನ ಧರ್ಮದ ಪಾವಿತ್ರಕ್ಕೆ ಧಕ್ಕೆ ತರುತ್ತಿರುವುದು ಧರ್ಮ ವಿರೋಧಿ ಶಕ್ತಿಗಳ ಹಳೆಯ ತಂತ್ರ. ಸರ್ಕಾರ ನೀತಿಯನ್ನು ಅನುಸರಿಸಿ ಆರೋಪದ ಹಿಂದೆ ಇರುವ ನಿಜ ಸ್ವರೂಪವನ್ನು ತಕ್ಷಣ ಬಹಿರಂಗ ಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸರ್ಕಾರವು ತನಿಖೆಯನ್ನು ತ್ವರಿತಗೊಳಿಸಲು  ಗೃಹ ಸಚಿವರ ಮೂಲಕ ಪ್ರಗತಿ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಲು ಹಾಗೂ ಹಿಂದೂ ಧರ್ಮದ ಪಾವಿತ್ರ್ಯವನ್ನು ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment