ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

Gopalakrishna Belur – ಗ್ಯಾರಂಟಿ ಯೋಜನೆ ಬಡವರ ಬದುಕಿಗೆ ಭದ್ರ ಬುನಾದಿ – Guarantee scheme is a solid foundation for the lives of the poor

On: August 8, 2025 9:55 AM
Follow Us:
---Advertisement---

ಸಾಗರ : ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭದ್ರ ಬುನಾದಿಯಾಗಿದೆ ಎಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ಹೇಳಿದರು.

ಅವರು ತಾಲ್ಲೂಕಿನ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.beluru Gopalakrishna 2

ಸಾಗರ ಕ್ಷೇತ್ರದಲ್ಲಿ 50,000 ಜನರು ಈ ಪ್ರಯೋಜನವನ್ನು ಪಡೆಯುತ್ತಿವೆ. ಇಲ್ಲಿಯವರೆಗೆ 168 ಕೋಟಿ ಹಣವನ್ನು ಈ ಯೋಜನೆ ಅಡಿ ನೀಡಲಾಗಿದೆ. ಈ ಗ್ಯಾರಂಟಿ ಯೋಜನೆಗಳು ಬಡವರು ಆರ್ಥಿಕವಾಗಿ ಸದೃಢವಾಗಲು ಸಹಾಯಕವಾಗಿದೆ ಎಂದು ಹೇಳಿದರು.

ಅಭಿವೃದ್ಧಿ ಬಗ್ಗೆ ಟೀಕೆ ಮಾಡುವವರಿಗೆ ಮುಂದಿನ  ದಿನಗಳಲ್ಲಿ ಅಭಿವೃದ್ದಿ ಮಾಡಿ ತೋರಿಸುತ್ತೇನೆ ಎಂದು ಸವಾಲು ಹಾಕಿದರು.

ಶಿಕ್ಷಣ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.  ಸರ್ಕಾರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲು ಹೆಚ್ಚಿನ ಒತ್ತು ನೀಡುತ್ತಿದೆ. 30 ಆಂಗ್ಲ ಮಾಧ್ಯಮ ಶಾಲೆಗಳನ್ನು ನೀಡಿದೆ. ಕ್ಷೇತ್ರಕ್ಕೆ ಈ ಭಾರಿ 20 ಅಂಗನವಾಡಿ ಕೇಂದ್ರಗಳು ಬಂದಿವೆ. ಪ್ರತಿ ಅಂಗನವಾಡಿ ಕೇಂದ್ರಕ್ಕೆ 20 ಲಕ್ಷ ವೆಚ್ಚದಲ್ಲಿ ನವೀನ ರೀತಿಯಲ್ಲಿ ಅಂಗನವಾಡಿ ಕೇಂದ್ರಗಳು ನಿರ್ಮಾಣವಾಗುತ್ತವೆ.beluru Gopalakrishna 1

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕಡೆಯಿಂದ 50 ಕೋಟಿ 50 ಕೋಟಿ ಹಣ ಬಿಡುಗಡೆಯಾಗಿದ್ದು, ಅಭಿವೃದ್ಧಿಯ ಕಾರ್ಯ ಆರಂಭವಾಗಲಿದೆ. ಕೆರೆಗಳ ಪುನಶ್ಚೇತನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಮಳೆಗಾಲ ಮುಗಿದ ತಕ್ಷಣ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಹೊಸನಗರ ಸಾಗರ ಕ್ಷೇತ್ರಕ್ಕೆ 234 ಕಾಲು ಸಂಕಗಳು ಮಂಜೂರಾಗಿದ್ದು, ಸಾರ್ವಜನಿಕರ ರೈತರ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಿದರು.

ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ ಲ್ಯಾವಿಗೆರೆ ಮಾತನಾಡಿ, ವಾರಕ್ಕೊಮ್ಮೆ ಆನಂದಪುರದಲ್ಲಿ ಪ್ರೆಸ್ ಮೀಟ್ ಮಾಡಿ ಟೀಕೆ ಮಾಡುವವರಿಗೆ  ಶಾಸಕರು ಅಭಿವೃದ್ಧಿ ಮೂಲಕ ತೋರಿಸುತ್ತಿದ್ದಾರೆ. ಅಭಿವೃದ್ಧಿಯನ್ನು ನೋಡಿ ಹೊಟ್ಟೆ ಉರಿಯಿಂದಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಅವರ ಪತ್ರಿಕ ಹೇಳಿಕೆಗೆ ಪ್ರತ್ಯುತ್ತರ ನೀಡದೆ ಅಭಿವೃದ್ಧಿಯ ಮೂಲಕ ಉತ್ತರ ನೀಡುತ್ತಿದ್ದೇವೆ ಎಂದು ಪರೋಕ್ಷವಾಗಿ ಹೆಸರೆಳದೆ ಬಿಜೆಪಿ ಮುಖಂಡರನ್ನು ಕಾಲೆಳೆದರು.

ಈ ಸಂದರ್ಭದಲ್ಲಿ ಆಚಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಖಲೀಮುಲ್ಲಾ ಖಾನ್, ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ್ ಲ್ಯಾವಿಗೆರೆ, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಗ್ರಾಮ ಪಂಚಾಯಿತಿಯ ಸದಸ್ಯರುಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇👇

 

 

 

 

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment