ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಅಕ್ರಮ ದನ ಸಾಗಾಟ – ಇಬ್ಬರ ಬಂಧನ – ಗೋವುಗಳ ರಕ್ಷಣೆ Illegal cattle smuggling – TWo arrested – Cow protection

On: September 6, 2025 12:02 PM
Follow Us:
---Advertisement---

ಸಾಗರ : ತಾಲೂಕಿನ ತ್ಯಾಗರ್ತಿ ಗ್ರಾಮದ ಮಾರಿಕಾಂಬಾ ಸರ್ಕಲ್ ಅಕ್ರಮ ದನಸಾಗಾಟ ಮಾಡುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ತಡರಾತ್ರಿ ಅಕ್ರಮವಾಗಿ ದನಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ  ಅನುಮಾನಗೊಂಡ ತ್ಯಾಗರ್ತಿ ಗ್ರಾಮಸ್ಥರು  ಮಾರಿಕಾಂಬಾ ಸರ್ಕಲ್ ನಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಸಾಗಾಟ ಬಯಲಿಗೆ ಬಂದಿದೆ. Cow smugglingದನ ಸಾಗಾಟಕ್ಕೆ ಬಳಸಿದ ವಾಹನ

      ವಾಹನದಲ್ಲಿ ಎರಡು ಕೋಣ ಹಾಗೂ 4 ಹೋರಿಗಳನ್ನು ಹಿಂಸಾತ್ಮಕವಾಗಿ ಪರವಾನಿಗೆ ಇಲ್ಲದೆ ಸಾಗಾಟ ಮಾಡುವುದು ಕಂಡುಬಂದಿದೆ. ಈ ಜಾನುವಾರುಗಳನ್ನು ಅಡ್ಡೇರಿ ಗ್ರಾಮದ ನಾಗರಾಜಪ್ಪ ಎಂಬುವವರಿಂದ 38,000ಗಳನ್ನು ಕೊಟ್ಟು ಖರೀದಿಸಿದ್ದು, ಇವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ ಗಿಣಿವಾಲ ಗ್ರಾಮಕ್ಕೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ.

ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ವಾಹನದಲ್ಲಿ ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ  ಸೊರಬ ತಾಲ್ಲೂಕಿನ  ಇಬ್ಬರನ್ನು ಬಂಧನ ಮಾಡಿದ್ದು, ಆನಂದಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಶಪಡಿಸಿಕೊಂಡ ಹಸುಗಳನ್ನು ಮುರುಘಾಮಠದ ಗೋಶಾಲೆಗಳಿಗೆ ಬಿಡಲಾಗಿದೆ.

ಪೋಲಿಸ್ ಸಿಬ್ಬಂದಿಗಳಾದ ಸಿಪಿಸಿ ನಿರಂಜನ್ ಹಾಗೂ ಚಾಲಕರಾದ ಎಪಿಸಿ ಪ್ರದೀಪ್ ಅವರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, 112 ಗೆ ಕರೆ ಬಂದ ಹಿನ್ನೆಲೆಯಲ್ಲಿ, ತಡರಾತ್ರಿ ಸ್ಥಳಕ್ಕೆ ಹೋಗಿ ವಾಹನವನ್ನು ವಶಪಡಿಸಿಕೊಂಡು ದೂರು ದಾಖಲಿಸಿರುತ್ತಾರೆ.

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಆನಂದಪುರದ ವಿದ್ಯುತ್ ವಿತರಣಾ ಕೇಂದ್ರ ತುರ್ತು ನಿರ್ವಹಣೆ – ವಿದ್ಯುತ್ ವ್ಯತ್ಯಯ – Anandapura Power Distribution center emergency management – power outage

ಸಾಗರವನ್ನು ಜಿಲ್ಲೆಯನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಶಾಸಕ ಗೋಪಾಲಕೃಷ್ಣ ಬೇಳೂರು MLA Gopalakrishna Belur wrote a letter to chief minister siddaramaiah to make Sagara taluk a district.

ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ Date set for Kadlehanklu Marikamba Devi’s festival

ಉತ್ತಮ ಸಮಾಜ ಕಟ್ಟಲು ಯುವ ಪಿಳಿಗೆ ಸದೃಢರಾಗಬೇಕು -ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ -The younger generation must become strong to build a better society

ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಪ್ರಕರಣ – ಆರೋಪಿಗಳ ಪರವಾಗಿ ಬಂದ ತೀರ್ಪು – Police station assault case – verdict in favor of the accused

ಭಾರಿ ಮಳೆಗೆ ಕೊಚ್ಚಿಕೊಂಡು ಹೋದ ನಾಟಿ ಮಾಡಿದ ಭತ್ತದ ಗದ್ದೆಗಳು Planted rice fields washed away by heavy rains

Leave a Comment