ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ವಲಯ ಅರಣ್ಯ ಕಚೇರಿ ವ್ಯಾಪ್ತಿಯ ಕಣಗಲಕೊಪ್ಪ ಗ್ರಾಮದ ಮನೆ ಸಮೀಪ ಸಂಗ್ರಹಿಸಿಟ್ಟಿದ್ದ ಸೌದೆಯ ಕೆಳಗೆ ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿ ಆತಂಕ ಉಂಟು ಮಾಡಿತ್ತು. ಸ್ಥಳೀಯರು ಕಾಳಿಂಗ ಸರ್ಪ ಕಂಡ ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ನೇಕ್ ಕಿರಣ್ ಎಂಬವರಿಗೆ ತಿಳಿಸಿದ್ದರು.
ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಕಾಡಿನಲ್ಲಿ ಬಿಟ್ಟಿದ್ದಾರೆ. ಹಾವು ಸುಮಾರು 16 ಅಡಿ ಉದ್ದ, 8.700 ಕೆ.ಜಿ ತೂಕವಿತ್ತು ಎನ್ನಲಾಗಿದೆ.
ಸುದ್ದಿಯ ಸಂಪೂರ್ಣ ವಿಡಿಯೋ





