ಸಾಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿ ಬೆಲೆಬಾಳುವ ಅಡಿಕೆ ಮರಗಳು ಸಂಪೂರ್ಣ ನಾಶವಾದ ಘಟನೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಲಕ್ಕವಳ್ಳಿ ಗ್ರಾಮದಲ್ಲಿ ನಡೆದಿದೆ.
ಲಕ್ಕವಳ್ಳಿ ಗ್ರಾಮದ ಮುರುಗೇಂದ್ರಪ್ಪಗೌಡ್ರು ಎಂಬುವರಿಗೆ ಸೇರಿದ ಅಡಿಕೆ ತೋಟ ಆಕಸ್ಮಿಕ ಟಿಸಿ ಯ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಹುತೇಕ ಅಡಿಕೆ ಮರಗಳು ಸುಟ್ಟು ಕರಕಲಾಗಿದೆ.
ಸುಮಾರು 350ಕ್ಕೂ ಹೆಚ್ಚು ಅಡಿಕೆ ಮರಗಳು ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಇನ್ನೊಂದೆರಡು ವರ್ಷದಲ್ಲಿ ಮೊದಲ ಅಡಿಕೆ ಪಸಲು ಕೊಯ್ಲು ಮಾಡಬೇಕಾಗಿದ್ದ ರೈತನ ಮೊಗದಲ್ಲಿನಿರಾಸೆ ಉಂಟಾಗಿದೆ.
ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಹಾರದ ನಿರೀಕ್ಷೆಯಲ್ಲಿ ರೈತರು ಇದ್ದಾರೆ.





