ಸಾಗರ : ಹಾವು ಕಚ್ಚಿ ರೈತನೊಬ್ಬ ಸಾವನಪ್ಪಿರುವ ಘಟನೆ ತಾಲೂಕಿನ ಆನಂದಪುರ ಸಮೀಪದ ಗೌತಮಪುರದಲ್ಲಿ ನಡೆದಿದೆ.
ಗೌತಮಪುರದ ಹುಚ್ಚಪ್ಪ (65) ಹಾವು ಕಚ್ಚಿ ಮೃತ ಪಟ್ಟ ವ್ಯಕ್ತಿಯಾಗಿದ್ದಾನೆ. ಹುಚ್ಚಪ್ಪ ಅವರು ಮಂಗಳವಾರ ರಾತ್ರಿ ತೋಟಕ್ಕೆ ನೀರು ಹಾಯಿಸಲು ಹೋದಾಗ ಎಡ ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಅವರು ಮನೆಗೆ ಬಂದು ತಿಳಿಸಿದ ತಕ್ಷಣ ಪ್ರಥಮ ಚಿಕಿತ್ಸೆಗಾಗಿ ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





