ಸಾಗರ : ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬಳ್ಳಿಬೈಲು ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಮ್ಮ (71) ಅಡಿಕೆ ತೋಟದಲ್ಲಿ ಕಳೆ ಸವರುತ್ತಿದ್ದ ಸಂದರ್ಭದಲ್ಲಿ ವಿಷದ ಹಾವು ಕಚ್ಚಿ ಸಾವನಪ್ಪಿದ್ದಾರೆ. ಹಾವು ಕಚ್ಚಿದ ತಕ್ಷಣ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಶಂಕರಪ್ಪ, ಶಿವು ಹಾಗೂ ಗಣೇಶ್ ಅವರು ಗಮನಿಸಿ ತಕ್ಷಣ ಅವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ





