ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ – ಶಾಸಕ ಗೋಪಾಲಕೃಷ್ಣ ಬೇಳೂರು – Provide quality education to children – MLA Gopalakrishna Belur suggests

On: September 25, 2025 10:19 AM
Follow Us:
---Advertisement---

ಸಾಗರ : ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದರು.

ಅವರು ಸಾಗರ ತಾಲ್ಲೂಕಿನ ಹೊಸೂರು ಸಮೀಪದ ಕೋಣನತಲೆ ಗ್ರಾಮದಲ್ಲಿರುವ ಕಾಲಭೈರವ ದೇವಸ್ಥಾನದ ಮುಂಭಾಗ ಭೈರವ ಸ್ತಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದರು.beluru hsr 1

ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಯಾವುದೇ ಸಮಾಜದ ಅಭಿವೃದ್ಧಿಯಾಗುತ್ತದೆ. ನಿಮ್ಮ ಜಾನಪದ ಕಲೆಯಿಂದ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದೀರಿ. ಆದರೆ ಮಕ್ಕಳಿಗೆ ಜಾನಪದ ಕಲೆಯ ಜೊತೆಗೆ ಉನ್ನತ ವಿದ್ಯಾಭ್ಯಾಸ ನೀಡುವುದರ ಮೂಲಕ ವಿವಿಧ ಹುದ್ದೆಗಳನ್ನು ಅಲಂಕರಿಸುವ ರೀತಿಯಲ್ಲಿ ಶಿಕ್ಷಣ ನೀಡಬೇಕೆಂದು ಸಲಹೆ ನೀಡಿದರು.

ಯಾವುದೇ ಕಾರಣಕ್ಕೂ ಮೂಢನಂಬಿಕೆಗಳ ಮೊರೆ ಹೋಗಬೇಡಿ, ದೇವರಲ್ಲಿ ಭಕ್ತಿಯಿಂದ ದೇವರ ಪೂಜೆ ಮಾಡಿ ನಂಬಿಕೆ ಇಟ್ಟರೆ ಪುಣ್ಯ ಲಭಿಸುತ್ತದೆ ಎಂದು ಹೇಳಿದರು.beluru hsr 2

ಹಿಂದೂ ಧರ್ಮದಲ್ಲಿ ಧಾರ್ಮಿಕ ನಂಬಿಕೆಯಾಗಿ ನೆಲೆ ಊರಿದೆ. ಪ್ರತಿಯೊಬ್ಬರಿಗೂ ದೇವರ ಮೇಲೆ ಅಪಾರ ನಂಬಿಕೆ ಇದೆ. ಪ್ರತಿ ವರ್ಷವೂ ಸಹ 40 ರಿಂದ 50 ದೇವಸ್ಥಾನಗಳಿಗೆ ಅನುದಾನವನ್ನು ನೀಡುತ್ತಾ ಬಂದಿರುವೆ. ಈಗಾಗಲೇ 94 ದೇವಸ್ಥಾನಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರೇವತಿ ವಹಿಸಿದ್ದರು. ಕಾಲಭೈರವ ಜೋಗಿ ಚಾರಿಟೇಬಲ್ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಕೆ ಗುಡ್ಡಪ್ಪ ಜೋಗಿ, ಹೊಸೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಚೌಡಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಶರತ್, ಪ್ರಮುಖರಾದ ಲೋಕೇಶ್, ದಿನೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜ ನಾಯ್ಕ್ ಇನ್ನಿತರರು ಉಪಸ್ಥಿತರಿದ್ದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಎಸ್ ಎಸ್ ಎಲ್ ಸಿ ಪರೀಕ್ಷೆ – ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿ ಪೂರ್ವ ವಿ ಪಾಟೀಲ್. Creative international school student Purva v patil who got first place in SSLC examination.

ಸಚಿವ ಸ್ಥಾನಕ್ಕಾಗಿ ಅಂಬೇಡ್ಕರ್ ಜಯಂತಿಯನ್ನು ಮರೆತ ಶಾಸಕ ಗೋಪಾಲಕೃಷ್ಣ ಬೇಳೂರು – ರತ್ನಾಕರ್ ಹೊನಗೋಡು. MLA Gopalakrishna Belur forgot Ambedkar Jayanti to get a ministerial post – Ratnakara honagodu.

ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು – ದೂರು ದಾಖಲು. Illegal sand storage at creative international school -File a complaint.

ಮಾರಣಾಂತಿಕ ಹಲ್ಲೆ – ಏಳು ಆರೋಪಿತರ ವಿರುದ್ಧ ದೂರು ದಾಖಲು. Fatal assault – complaint filed against seven accused.

ವಿರೋಧ ಪಕ್ಷಗಳ ಟೀಕೆಗಳಿಗೆ ಕಿವಿಗೊಡದೆ ಅಭಿವೃದ್ಧಿಯತ್ತ ಸಾಗರ ಕ್ಷೇತ್ರ. Constituency towards development without listening to the criticism of the opposition – Gopalakrishna Belur

ಕಾರು ಹಾಗೂ ಬೈಕ್ ನಡುವೆ ಅಪಘಾತ – ಸ್ಥಳದಲ್ಲೇ ಬೈಕ್ ಸವಾರ ಸಾವು. Accident between car and bike – biker dies on the spot.

Leave a Comment