ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಕುಮದ್ವತಿ ನದಿ ಸೇತುವೆ ಮೇಲೆ ಕ್ಯಾಂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮೃತ ಬೈಕ್ ಸವಾರ ಸಾಗರ ತಾಲೂಕಿನ ಗೌತಮಪುರ ಗ್ರಾಮದ ನಿವಾಸಿ ಮಿಲನ್ ಎಂದು ತಿಳಿದಿದೆ. ಮಿಲನ್ ಕಾರ್ಯನಿಮಿತ್ತ ಶಿರಾಳಕೊಪ್ಪ ಪಟ್ಟಣಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ. ನಂತರ ಮರಳಿ ಊರಿಗೆ ಬರುವ ಸಂದರ್ಭದಲ್ಲಿ ಕುಮದ್ವತಿ ನದಿ ಸೇತುವೆ ಮೇಲೆ ಈ ಅಪಘಾತ ಸಂಭವಿಸಿ ಮೃತಪಟ್ಟಿದ್ದಾನೆ.
ಅಪಘಾತ ಸ್ಥಳಕ್ಕೆ ಪಿಎಸ್ಐ ಶರತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.





