ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಕುಟ್ರಳ್ಳಿ ಸಮೀಪದ ಟೋಲ್ ಗೇಟ್ ತೆರುವುಗೊಳಿಸುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನೀಡಿದ್ದ ಶಿಕಾರಿಪುರ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಇಲ್ಲಿನ ವರ್ತಕರು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಬಂದ್ ನಡುವೆಯೂ ಬಸ್ಸುಗಳು ಎಂದಿನಂತೆ ಸಂಚಾರ ನಡೆಸಿದ್ದು, ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳುತ್ತಿದ್ದ ದೃಶ್ಯ ಕಂಡು ಬಂದಿದೆ.
ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಖಾಸಗಿ ಬಸ್ ನಿಲ್ದಾಣ ಸಮೀಪ ಟೈರ್ ಸುಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ತಾಲ್ಲೂಕು ಕಚೇರಿ ಮುಂಭಾಗವೂ ಪ್ರತಿಭಟನೆ ನಡೆಸಿದರು.





